Bengaluru, ಮಾರ್ಚ್ 24 -- ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಉತ್ತರ ಕರ್ನಾಟಕದ ಮಂದಿಯ ಪಾದಯಾತ್ರೆ ಆರಂಭವಾಗುವುದು ಶ್ರೀಶೈಲದ ಕಡೆಗೆ. 2025ರ ಮಾರ್ಚ್ 27 ರಿಂದ 31 ರವರಿಗೆ ಶ್ರೀಶೈಲದಲ್ಲಿ ಯುಗಾದಿ ಮಹೋತ್ಸವ ನಡೆಯುತ್ತದೆ. ಹೀಗಾಗಿ ಈ ಉತ್ಸವದಲ್ಲಿ ಭಾಗವಹಿಸಲು ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಬೆಳಗಾವಿ, ಗದಗ ಹಾಗೂ ರಾಯಚೂರು ಭಕ್ತರು ಹೆಚ್ಚಾಗಿ ಪಾದಯಾತ್ರೆ ಮಾಡುತ್ತಾರೆ. ವಿಶೇಷವಾಗಿ ಕರ್ನಾಟಕದ ಗಡಿ ದಾಟಿ ಆಂಧ್ರದ ನಲ್ಲಮಲ್ಲ ಕಾಡಿನ ಮೂಲಕ ಪಾದಯಾತ್ರೆ ಕೈಗೊಂಡು ಶ್ರೀಶೈಲವನ್ನು ತಲುಪುತ್ತಾರೆ. ಶ್ರೀಶೈಲ ಯುಗಾದಿ ಮಹೋತ್ಸವದಲ್ಲಿ ಭಾಗವಹಿಸಿ, ಈ ವರ್ಷ ಉತ್ತಮ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾರೆ.
ಕರ್ನಾಟಕದ ಭಕ್ತರು ಮಾತ್ರವಲ್ಲದೆ, ಮಹಾರಾಷ್ಟ್ರದ ಭಕ್ತರು ಕೂಡ ಈ ಸಂದರ್ಭದಲ್ಲಿ ಶ್ರೀಶೈಲಕ್ಕೆ ಆಗಮಿಸುತ್ತಾರೆ. ಇನ್ನ ಶ್ರೀಶೈಲಂ ದೇವಸ್ಥಾನ ಮತ್ತು ಜಿಲ್ಲಾಡಳಿತಗಳು ನಲ್ಲಮಲ್ಲ ಕಾಡಿನಲ್ಲಿ ನಡೆದು ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಹಲವು ರೀತಿಯ ವ್ಯವಸ್ಥೆಗಳನ್ನು ಮಾಡಿವೆ. ...
Click here to read full article from source
To read the full article or to get the complete feed from this publication, please
Contact Us.