ಭಾರತ, ಜುಲೈ 23 -- ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಶುರುವಾಗಿದ್ದು, ಜುಲೈ 29 ರಿಂದ ಆಪರೇಷನ್ ಸಿಂದೂರ ಕುರಿತು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ವಿಶೇಷ ಚರ್ಚೆಗಾಗಿ ಸರ್ಕಾರವು ಮುಂಗಾರು ಅಧಿವೇಶನದಲ್ಲಿ 16 ಗಂಟೆಗಳನ್ನು ಮೀಸಲಿಡುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಚಾರವಾಗಿ ಮಾತನಾಡಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲೂ ಪ್ರಧಾನಿ, ಕೇಂದ್ರ ಗೃಹ ಸಚಿವ, ರಕ್ಷಣಾ ಸಚಿವರು ಹೇಳಿಕೆ ನೀಡಬೇಕು ಎಂಬ ಒತ್ತಾಯ, ಆಗ್ರಹ ಹೆಚ್ಚಾಗಿರುವ ಕಾರಣ ಸರ್ಕಾರವೂ ಈ ಬಗ್ಗೆ ಗಮನಹರಿಸಬಹುದು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ರಾಜ್ಯಸಭೆಯ ಕಲಾಪ ಸಲಹಾ ಸಮಿತಿ ಸಭೆ ಬುಧವಾರ ನಡೆದಿದ್ದು, ಜುಲೈ 29 ರಂದು ಮೇಲ್ಮನೆಯಲ್ಲಿ ಆಪರೇಷನ್ ಸಿಂದೂರ ಕುರಿತ ಚರ್ಚೆ ನಡೆಸಲು ತೀರ್ಮಾನಿಸಿತು ಎಂದು ಎಎನ್ಐ ವರದಿ ಮಾಡಿದೆ. ಮುಂದ...
Click here to read full article from source
To read the full article or to get the complete feed from this publication, please
Contact Us.