Bengaluru, ಮೇ 2 -- ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೈಕೋರ್ಟ್‌ ನಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ತಮ್ಮ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ದಾಖಲಿಸಿರುವ ಎಫ್‌ ಐಆರ್‌ ಅನ್ನು ರದ್ದುಗೊಳಿಸುವಂತೆ ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.

ತಾನು ಜನಪ್ರತಿನಿಧಿ ಎಂಬ ಕಾರಣಕ್ಕೆ ಇಂತಹ ಹೇಳಿಕೆ ಅಥವಾ ವರ್ತನೆಗೆ ದಾಖಲಾಗಿರುವ ಕ್ರಿಮಿನಲ್‌ ಮೊಕದ್ದಮೆಯಿಂದ ರಕ್ಷಣೆ ಪಡೆಯಲಾಗದು. ಇದು ಶಾಸನಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ಶಾಸಕಾಂಗ ವ್ಯವಹಾರಗಳಿಗೆ ಸಂಬಂಧಪಟ್ಟ ಪದ ಬಳಕೆ ಅಥವಾ ಕ್ರಿಯೆಯಾಗಿದ್ದರೆ ರಕ್ಷಣೆ ಕೊಡಬಹುದಾಗಿತ್ತು. ಆದರೆ ರವಿ ಅವರು ಆಡಿರುವ ಮಾತುಗಳು ಮತ್ತು ವರ್ತನೆಗೆ ಯಾವುದೇ ಕಾರಣಕ್ಕೂ ರಕ್ಷಣೆ ನೀ...