ಭಾರತ, ಏಪ್ರಿಲ್ 10 -- Pawan Kalyan Son: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್ ಸಿಂಗಾಪುರದ ಬೇಸಿಗೆ ಶಿಬಿರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮಾರ್ಕ್ ಶಂಕರ್ ಅವರ ಕಾಲು ಮತ್ತು ಕೈಗಳಿಗೆ ಗಾಯಗಳಾಗಿವೆ. ಕಪ್ಪು ಹೊಗೆಯನ್ನು ಉಸಿರಾಡಿದ ಕಾರಣ ಮಾರ್ಕ್ ಶಂಕರ್ ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ. ಈ ದುರಂತದ ಸುದ್ದಿ ತಿಳಿದ ಕೂಡಲೇ ಪವನ್ ಕಲ್ಯಾಣ್ ಮತ್ತು ಚಿರಂಜೀವಿ ಸಿಂಗಾಪುರಕ್ಕೆ ತೆರಳಿದರು. ಈ ನಡುವೆ, ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಅವರ ಫೋಟೋ ವೈರಲ್ ಆಗಿದೆ. ಬಾಲಕನ ಕೈಯಲ್ಲಿ ಬ್ಯಾಂಡೇಜ್ ಹಿಡಿದಿರುವ ಫೋಟೋ ವೈರಲ್ ಆಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ತೆಲುಗು ವರದಿ ಮಾಡಿದೆ.

ಸಿಂಗಾಪುರ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪುತ್ರನಿಗೆ ಗಾಯವಾಗಿದೆ. ಗಾಯಗೊಂಡಿರುವ ಮಾರ್ಕ್‌ ಶಂಕರ್‌ಗೆ ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಕ್‌ ಶ...