ಭಾರತ, ಮೇ 7 -- ಆಪರೇಷನ್ ಸಿಂಧೂರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ವೇಳೆ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಭಾರತ ಸರ್ಕಾರ ಬುಧವಾರ (ಮೇ 7) ನಸುಕಿನ ವೇಳೆ ತಕ್ಕ ಪ್ರತ್ಯುತ್ತರ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನಿಗಾದಲ್ಲೇ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದ ನಿಶ್ಚಿತ 9 ಉಗ್ರ ನೆಲೆ (ಉಗ್ರ ತಾಣ)ಗಳ ಮೇಲೆ ಭಾರತ ದಾಳಿ ನಡೆಸಿದೆ. ಈ ಕಾರ್ಯಾಚರಣೆಗೆ ಭಾರತ ಆಪರೇಷನ್ ಸಿಂಧೂರ ಎಂಬ ಹೆಸರನ್ನೂ ಇಟ್ಟಿದೆ. ಭಾರತ ನಡೆಸಿದ ದಾಳಿಯು ನಿಶ್ಚಿತವಾದ ಅಂದರೆ ಕೇಂದ್ರೀಕೃತ ಹಾಗೂ ಅಳೆದು ತೂಗಿದ ಪ್ರಚೋದನಕಾರಿಯಲ್ಲದ ಭಯೋತ್ಪಾದನಾ ನೆಲೆಗಳ ಮೇಲಿನ ದಾಳಿ ಎಂಬುದನ್ನು ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.
ಜಮ್ಮು - ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ಅಮಾಯಕ ಭಾರತೀಯ ಮಹಿಳೆಯರ ಪತಿಯಂದಿರನ್ನು ಹತ್ಯೆ ಮಾಡಿದ ಉಗ್ರರು, ಮೋದಿಗೆ ಹೋಗಿ ಹೇಳು ಎಂಬ ಸಂದೇಶ ನೀಡಿದ್ದರು. ಮಹಿಳೆಯರು ಅಳುತ್ತ ಈ ವಿಚಾರವನ್ನು ಹೇಳಿಕೊಂಡಿದ್ದರು. ಉಗ್ರರ ಸವಾಲನ್ನು ಸ್ವೀಕರಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.