Bengaluru, ಮೇ 4 -- ಬೆಂಗಳೂರು: ಹಿಂದೂ ಕಾರ್ಯಕರ್ತ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಗುತ್ತಿಗೆ ಹಂತಕರನ್ನು ನೇಮಿಸಿಕೊಳ್ಳಲು ಮೊಹಮ್ಮದ್ ಫಾಜಿಲ್ ಕುಟುಂಬಕ್ಕೆ ನೀಡಿದ ಪರಿಹಾರವನ್ನು ಬಳಸಲಾಗಿದೆ ಎಂಬ ವರದಿಗಳ ಬಗ್ಗೆ ನನಗೆ ತಿಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚಿಸಿ ಹೆಚ್ಚಿನ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.

2022 ರಲ್ಲಿ ಸುರತ್ಕಲ್‌ನಲ್ಲಿ ಮುಸುಕುಧಾರಿಗಳ ಗುಂಪೊಂದು ಫಾಜಿಲ್ ಅವರನ್ನು ಕೊಲೆ ಮಾಡಿತ್ತು. ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫಾಜಿಲ್ ಪರಿಹಾರದ ಹಣ ಬಳಕೆ ಆರೋಪ ಕುರಿತು ಅದನ್ನು ಪರಿಶೀಲಿಸಬೇಕಾಗಿದೆ. ನನಗೆ ಯಾವುದೇ ಮಾಹಿತಿ ಇಲ್ಲ. ನಿನ್ನೆ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್...