Mangalore, ಮೇ 16 -- ಮಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್(39) ಬಂಧಿತರು.ಮೂವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸ...