ಭಾರತ, ಮಾರ್ಚ್ 25 -- ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದ ರೋಚಕ ಕದನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರೋಚಿತ ಸೋಲು ಅನುಭವಿಸಿದ್ದಕ್ಕೆ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರು ಪ್ರತಿಕ್ರಿಯಿಸಿದ್ದು, ನಿರಾಸೆ ಅನುಭವಿಸಿದ್ದಾರೆ. ಮಾರ್ಚ್ 24ರಂದು ವಿಶಾಖಪಟ್ಟಣದಲ್ಲಿ ನಡೆದ ಐಪಿಎಲ್ನ 4ನೇ ಪಂದ್ಯದಲ್ಲಿ ಲಕ್ನೋ ಸುಲಭ ಗೆಲುವು ಸಾಧಿಸುವ ಹಂತದಲ್ಲಿತ್ತು. ಆದರೆ ಅಶುತೋಷ್ ಶರ್ಮಾ ಮತ್ತು ವಿಪ್ರಜ್ ನಿಗಮ್ ತಮ್ಮ ವೀರಾವೇಶದ ಬ್ಯಾಟಿಂಗ್ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಎಲ್ಎಸ್ಜಿ ಗೆಲುವನ್ನು ಡೆಲ್ಲಿಯತ್ತ ವರ್ಗಾಯಿಸಿ 1 ವಿಕೆಟ್ ರೋಚಕ ಜಯ ಸಾಧಿಸಿದರು.
65ಕ್ಕೆ 5 ವಿಕೆಟ್ ಕಳೆದುಕೊಂಡಿತ್ತು. ಗೆಲುವಿಗೆ ಇನ್ನೂ 145 ರನ್ ಬೇಕಿತ್ತು. ಅದು ಕೂಡ ಕೇವಲ 80 ಎಸೆತಗಳಿಗೆ. ವಿಕೆಟ್ಗಳು ಇಲ್ಲದಿದ್ದ ಈ ಹಂತದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟು ತಂಡವನ್ನು ಒಂದು ಹಂತಕ್ಕೆ ತಂದಿಟ್ಟಿದ್ದು ಟ್ರಿಸ್ಟಾನ್ ಸ್ಟಬ್ಸ್. ಬಳಿಕ ಅದನ್ನು ಅಶುತೋಷ್ ಮತ್ತು ವಿಪ್ರಜ್ ಮುಂದುವರೆಸಿದ...
Click here to read full article from source
To read the full article or to get the complete feed from this publication, please
Contact Us.