ಭಾರತ, ಜನವರಿ 29 -- ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬೆಳೆವಣಿಗೆಗಳು ನಡೆಯುತ್ತಿದ್ದು,2024ರ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ದಕ್ಷಿಣ ಭಾರತದ ಸೂಪರ್ ಸ್ಟಾರ್ ದಳಪತಿ ವಿಜಯ್ ರಾಜಕೀಯ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ನಟ ವಿಜಯ್ ಈ ಬಗ್ಗೆ ತಮ್ಮ ಅಭಿಮಾನಿಗಳ ಪ್ರಮುಖ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಅಂತಿಮವಾಗಿ ರಾಜಕೀಯದಲ್ಲಿ ಸಕ್ರಿಯವಾಗಲು ನಿರ್ಧಾರ ಮಾಡಿದ್ದಾರೆ.

ಗುರುವಾರ (ಜನವರಿ 25) ಔಪಚಾರಿಕವಾಗಿ ಪ್ರಕ್ರಿಯೆಗಳನ್ನು ಆರಂಭಿಸಿದ್ದಾರೆ. ಅಖಿಲ ಭಾರತ ದಳಪತಿ ವಿಜಯ್ ಮಕ್ಕಳ್ ಇಯಕ್ಕಂ, ಅಭಿಮಾನಿಗಳ ಸಂಘ ಕಂ ವೆಲ್ಫೇರ್ ಅಸೋಸಿಯೇಷನ್‌ನ ಪದಾಧಿಕಾರಿಗಳು ತಮಿಳುನಾಡಿನ ಪೂರ್ವ ಕರಾವಳಿಯ ಪನೈಯೂರಿನಲ್ಲಿರುವ ನಟನ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಮೂರು ಗಂಟೆಗಳ ನಡೆದ ಸಭೆಯಲ್ಲಿ ವಿಜಯ್ ಅವರು ಉಪಸ್ಥಿತರಿದ್ದರು. ತಮ್ಮ ನೆಚ್ಚಿನ ನಟ ರಾಜಕೀಯ ಪ್ರವೇಶಿಸಲು ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ. ರಾಜಕೀಯ ಸಂಘಟನೆಯ ಸಾಮಾನ್ಯ ಮಂಡಳಿಯ ಸದಸ್ಯರು ...