ಭಾರತ, ಮೇ 27 -- ರಾಮನಗರ: ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳೊಳಗೆ ಎಲ್ಲಾ ಕಡೆ ಸ್ಮಾರ್ಟ್ ಮೀಟರ್ ಅಳವಡಿಸುವಂತೆ ಸೂಚಿಸಿರುವುದರಿಂದ ರಾಜ್ಯಕ್ಕೆ ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಡಿಎಸ್ಎಸ್) ವಿಸ್ತರಿಸುವ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಆಗಸ್ಟ್ ತಿಂಗಳೊಳಗೆ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಕಟ್ಟರ್ ಅವರು ಸೂಚಿಸಿದ್ದಾರೆ. ಈ ಹಿಂದೆ ಆರ್ ಡಿಎಸ್ ಯೋಜನೆಯಡಿ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ಪ್ರತಿ ಮೀಟರ್ ಗೆ 900 ರೂ. ಸಬ್ಸಿಡಿ ನೀಡುತ್ತಿತ್ತು. ಆದರೆ, ಈಗ ಆ ಯೋಜನೆ ಇಲ್ಲ. ಹೀಗಾಗಿ ಆರ್‌ಡಿಎಸ್ ಯೋಜನೆ ವಿಸ್ತರಿಸುವಂತೆ ಕೇಂದ್ರ ಸಚಿವರನ್ನು ಮನವಿ ಮಾಡಿದ್ದೆ. ದೆಹಲಿಗೆ ಬಂದರೆ ಈ ಕುರಿತು ಚರ್ಚಿಸೋಣ ಎಂದಿದ್ದರು. ಅದರಂತೆ ಶೀಘ್ರವೇ ದೆಹ...