Hassan, ಮೇ 18 -- ಹಾಸನ: ಹಾಸನ ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ತೋಟಗಳನ್ನು ನಿರ್ಮಿಸಿಕೊಂಡಿದ್ದವರ ಮೇಲೆ ಕರ್ನಾಟಕ ಅರಣ್ಯ ಇಲಾಖೆ ಕೊನೆಗೂ ಛಾಟಿ ಬೀಸಿದೆ. ಭಾನುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದ ತಂಡಗಳು ಅರಣ್ಯ ಭೂಮಿಯಲ್ಲಿ ನಿರ್ಮಿಸಿದ್ದ ತೋಟಗಳನ್ನು ತೆರವುಗೊಳಿಸಿ ಭೂಮಿಯನ್ನು ಇಲಾಖೆ ವಶಕ್ಕೆ ಪಡೆದುಕೊಂಡಿವೆ. ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಏಳು ತಿಂಗಳ ಹಿಂದೆ ಬರೆದಿದ್ದ ಪತ್ರ ಆಧರಿಸಿ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಮಾಡಿಸಿದರು. ಇದರಿಂದ ಕೋಟ್ಯಂತರ ರೂ.ಬೆಲೆ ಬಾಳುವ 27 ಎಕರೆ ಅರಣ್ಯ ಭೂಮಿ ಇಕಲಾಖೆ ಸುಪರ್ದಿಗೆ ಬಂದಿದೆ. ಭೂಮಿ ಒತ್ತುವರಿ ಮಾಡಿಕೊಂಡಿದ್ದ ಹಲವರ ಮೇಲೆ ಈಗಾಗಲೇ ಕ್ರಿಮಿನಲ್‌ ಮೊಕದ್ದಮೆಯೂ ದಾಖಲಾಗಿದೆ.

Published by HT Digital Content Services with permission from HT Kannada....