Mysuru, ಮೇ 10 -- ಮೈಸೂರು: ಹಿರಿಯ ಸಾಹಿತಿ ಸವಿತಾ ನಾಗಭೂಷಣ ಅವರ 'ದಿನದ ಪ್ರಾರ್ಥನೆ' ಕವನ ಸಂಕಲನವು 2025 ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಸವಿತಾ ಅವರೇ ಮುನ್ನಡೆಸುವ ಶಿವಮೊಗ್ಗದ 'ನುಡಿ' ಪ್ರಕಾಶನವು 2024ರಲ್ಲಿ ಈ ಸಂಕಲನವನ್ನು ಪ್ರಕಟಿಸಿದೆ.ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2022 ರಲ್ಲಿ ಸ್ಥಾಪಿಸಿರುವ ಈ ಪ್ರಶಸ್ತಿಗೆ ಈ ಬಾರಿ 2020- 24ರ ಅವಧಿಯಲ್ಲಿ ಲೇಖಕಿಯರು ಪ್ರಕಟಿಸಿದ ಕವನ ಸಂಕಲನಗಳನ್ನು ಆಹ್ವಾನಿಸಿತ್ತು.ಲೇಖಕಿಯರು/ಪ್ರಕಾಶಕರಿಂದ ಒಟ್ಟು 110 ಸಂಕಲನಗಳು ಬಂದಿದ್ದವು. ತೀರ್ಪುಗಾರರಾಗಿ ಹಿರಿಯ ಕವಿಗಳಾದ ಪ್ರೊ. ಚ.ಸರ್ಮಮಂಗಳ, ಜಿ.ಪಿ.ಬಸವರಾಜು, ಡಾ. ಎಂ.ಎಸ್. ವೇದಾ ಅವರಿದ್ದ ಸಮಿತಿಯು, ಸವಿತಾ ನಾಗಭೂಷಣ ಅವರ 'ದಿನದ ಪ್ರಾರ್ಥನೆ' ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಸವಿತಾ ಅವರ ಅಖಂಡ ಮಾನವೀಯ ಪರ ನಿಲುವುಗಳು ಅವರ ಎಲ್ಲಾ ಬರಹಗಳಂತೆ ಈ ಸಂಕಲನದಲ್ಲಿಯೂ ಮುಂದುವರಿದಿವೆ ಎನ್ನುವುದು ತೀರ್ಪುಗಾರರ ಒಮ್ಮತದ ಅಭಿಪ್ರಾಯವಾಗಿತ್ತು. 25,000 ರೂ. ನಗದು, ಫಲಕ...
Click here to read full article from source
To read the full article or to get the complete feed from this publication, please
Contact Us.