ಭಾರತ, ಮೇ 30 -- ಬೆಂಗಳೂರು: ಹಿರಿಯ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇಂದು (ಮೇ 30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 80 ವರ್ಷ ವಯಸ್ಸಾಗಿತ್ತು. ಇವರು ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಯುಸಿರು ಎಳೆದಿದ್ದಾರೆ.
ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದವರಾದ ಎಚ್ಎಸ್ವಿ ಕನ್ನಡ ಸಾರಸ್ವತ ಲೋಕದ ಸಜ್ಜನ ಸಾಹಿತಿ ಎಂದು ಖ್ಯಾತಿ ಪಡೆದಿದ್ದರು. ಹಲವು ಭಾವಗೀತೆಗಳನ್ನು ಕರುನಾಡಿಗೆ ಕೊಟ್ಟ ಖ್ಯಾತಿ ಇವರದ್ದು, ಇವರು ಪೋಣಿಸಿದ ಭಾವಗೀತೆಗಳ ಸಾಲು ಎಂದೆಂದಿಗೂ ಕನ್ನಡಿಗರ ಮನದಲ್ಲಿ ಹಸಿರಾಗಿ ಉಳಿಯುವಂಥದ್ದು.
1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಪಕರಾಗಿ ನೇಮಕಗೊಳ್ಳುವ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸುತ್ತಾರೆ. 3 ದಶಕಗಳ ಕಾಲ ಪ್ರಾಧ್ಯಪಕರಾಗಿದ್ದ ಅವರು 2000ನೇ ಇಸವಿಯಲ್ಲಿ ತಮ್ಮ ವೃತ್ತಿಯಿಂದ ನಿವೃತ್ತಿ ಹೊಂದುತ್ತಾರೆ.
ಕಲಬುರಗಿಯಲ್ಲಿ ನಡೆದ 85ನೇ ಸಾಹಿತ್ಯ ಸಮ್ಮೇ...
Click here to read full article from source
To read the full article or to get the complete feed from this publication, please
Contact Us.