ಭಾರತ, ಏಪ್ರಿಲ್ 14 -- ಹುಬ್ಬಳ್ಳಿ: 5 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆ ನಡೆದ 6 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಇದೀಗ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಕೊಪ್ಪಳ ಮೂಲಕ ದಿನಗೂಲಿ ಕಾರ್ಮಿಕರಾದ ಬಾಲಕಿಯ ತಂದೆ-ತಾಯಿ ಕೆಲಸಕ್ಕೆಂದು ಹೋದಾಗ ಮಗು ಮನೆಯ ಬಳಿ ಆಟವಾಡುತ್ತಿತ್ತು. ಆಗ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ ಕರೆದೊಯ್ದ ಬಿಹಾರ ಮೂಲದ ಆರೋಪಿ ಆಕೆಯ ಮೇಲೆ ಅತ್ಯಚಾರ ಎಸಗಿ ಕೊಲೆ ಮಾಡಿ ಪಾಳು ಬಿದ್ದ ಕಟ್ಟಡದಲ್ಲಿ ಎಸೆದು ಹೋಗಿದ್ದ. ಈ ಘಟನೆ ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ನಡೆದಿದೆ.
ಪ್ರಕರಣ ಸಂಬಂಧಿಸಿ ಶಾಸಕ ಪ್ರಸಾದ ಅಬ್ಬಯ್ಯ ಅವರೊಂದಿಗೆ ಕೆಎಂಸಿ-ಆರ್ಐ ಆಸ್ಪತ್ರೆಗೆ ಬಂದಿದ್ದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸರ್ಕಾರದ ವತಿಯಿಂದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.