ಭಾರತ, ಮೇ 14 -- ಬೆಂಗಳೂರು: ಉತ್ತರ ಕರ್ನಾಟಕದ ರೈಲು ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹುಬ್ಬಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ. ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮತ್ತು ಕುಷ್ಟಗಿ ನಿಲ್ದಾಣಗಳ ನಡುವೆ ಹೊಸ ದೈನಂದಿನ ಎಕ್ಸ್ಪ್ರೆಸ್ ರೈಲು ಸೇವೆಗಳನ್ನು ಪ್ರಾರಂಭಿಸಲು ಸಂತಸ ವ್ಯಕ್ತಪಡಿಸಿದೆ. ಈ ರೈಲು ಸಂಚಾರ ಮೇ 16 ಮತ್ತು ಮೇ 17 ರಂದು ಶುರುವಾಗಲಿದೆ. ಉದ್ಘಾಟನಾ ವಿಶೇಷ ರೈಲು ಮೇ15 ರಂದು ಶುರುವಾಗಲಿದೆ. ಗದಗ-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆಯೂ ಇದೇ ವೇಳೆ ನಡೆಯಲಿದೆ.
ಗದಗ- ಕುಷ್ಟಗಿ ರೈಲು ಮಾರ್ಗ ಉದ್ಘಾಟನೆಯೂ ನಾಳೆ (ಮೇ 15) ನಡೆಯಲಿದ್ದು, ರೈಲು ಸಂಖ್ಯೆ 07353 ಕುಷ್ಟಗಿ - ಎಸ್ಎಸ್ಎಸ್ ಹುಬ್ಬಳ್ಳಿ ಉದ್ಘಾಟನಾ ವಿಶೇಷ ಎಕ್ಸ್ಪ್ರೆಸ್ (ಒನ್ ವೇ) ರೈಲಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ನಾಳೆ (ಮೇ 15) ಕುಷ್ಟಗಿ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಲಿದ್ದಾರೆ.
ಈ ...
Click here to read full article from source
To read the full article or to get the complete feed from this publication, please
Contact Us.