ಭಾರತ, ಜನವರಿ 29 -- ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್‌ಎಪಿಡಿಆರ್‌ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಇರುವ ಹಿನ್ನೆಲೆಯಲ್ಲಿ ನಾಳೆಯಿಂದ (ಜ.30) ಮೂರು ದಿನಗಳ ಕಾಲ ಬಿಲ್ಲಿಂಗ್, ಹೊಸ ಸಂಪರ್ಕ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 30ರ ಗುರುವಾರದಿಂದ 01ರ ಶನಿವಾರದವರೆಗೆ ತಂತ್ರಾಂಶ ಆಧಾರಿತ ಯಾವುದೇ ಸೇವೆಗಳು ಸಾಧ್ಯವಿಲ್ಲ. ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಕಂದಾಯ ಸಂಗ್ರಹ ಹೊರತುಪಡಿಸಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

(ಸುದ್ದಿ ಅಪ್ಡೇಟ್‌ ಮಾಡಲಾಗುತ್ತದೆ)

Published by HT Digital Content Services with permission from HT Kannada....