ಭಾರತ, ಫೆಬ್ರವರಿ 19 -- ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಪ್ರತಿಪಕ್ಷಗಳು ಹಾಗೂ ಜನಸಾಮಾನ್ಯರು ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಸರ್ಕಾರವು ಮಹತ್ವದ ನಿರ್ಧಾರವೊಂದಕ್ಕೆ ಬಂದಿದೆ. ಈ ತಿಂಗಳಿನಿಂದಲೇ ಅನ್ನಭಾಗ್ಯ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲು ಅಕ್ಕಿ ಕೊಡಲು ಕರ್ನಾಟಕ ಸರ್ಕಾರ ಮುಂದಾಗಿದೆ. ಅಗತ್ಯ ಪ್ರಮಾಣದ ಅಕ್ಕಿ ಲಭ್ಯವಿದ್ದು, ಅದರ ವಿತರಣೆಗೆ ಮುಂದಾಗಿದೆ. ಹೀಗಾಗಿ ಹಣದ ಬದಲಿಗೆ 5 ಕೆಜಿ ಅಕ್ಕಿಯನ್ನೇ ವಿತರಿಸಲಾಗುತ್ತಿದೆ.
ಇದುವರೆಗೂ ಅನ್ನಭಾಗ್ಯ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು. ಈ ತಿಂಗಳಿನಿಂದ ಇದು ಮುಂದುವರೆಯುವುದಿಲ್ಲ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಪ್ರಕಟಣೆ ಹೊರಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಸರ್ಕಾರವು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯನ್ನು ಘೋಷಿಸಿತ್ತು. ಇದರ...
Click here to read full article from source
To read the full article or to get the complete feed from this publication, please
Contact Us.