ಭಾರತ, ಫೆಬ್ರವರಿ 21 -- ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ ರೋಚಕ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ವಿಕೆಟ್ಗಳಿಂದ ಸೋಲಿಸುವ ಮೂಲಕ ಮುಂಬೈ ಇಂಡಿಯನ್ಸ್ ಡಬ್ಲ್ಯುಪಿಎಲ್ನಲ್ಲಿ ಎರಡನೇ ಗೆಲುವು ಸಾಧಿಸಿತು. ಕೌರ್ಗಳ ಅಬ್ಬರಕ್ಕೆ ತತ್ತರಿಸಿದ ಆರ್ಸಿಬಿ, ಟೂರ್ನಿಯಲ್ಲಿ ಮೊದಲ ಸೋಲಿಗೆ ಶರಣಾಯಿತು. ಎಲ್ಲಿಸ್ ಪೆರಿ (81) ಅವರ ಸ್ಫೋಟಕ ಆಟದ ನೆರವಿನಿಂದ ಆರ್ಸಿಬಿ 7 ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ಮುಂಬೈ 19.5 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿ ಗೆದ್ದು ಬೀಗಿತು. ನಾಯಕಿ ಹರ್ಮನ್ಪ್ರೀತ್ ಕೌರ್ (50) ಮತ್ತು ಅಮನ್ಜೋತ್ ಕೌರ್ (34*) ಅಬ್ಬರದ ಆಟವಾಡಿ ತವರಿನಲ್ಲಿ ಆರ್ಸಿಬಿ ಗೆಲುವಿನ ಕನಸನ್ನು ಭಗ್ನಗೊಳಿಸಿದರು.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.