ಭಾರತ, ಮೇ 23 -- ಬೆಂಗಳೂರಿನ ಚಂದಾಪುರದ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿರುವುದು ಹಾಗೂ ಕನ್ನಡ ಕಲಿಯುವುದಿಲ್ಲ ಎಂದು ಹೇಳಿರುವ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ. ಆಕೆ ಕನ್ನಡ ಕಲಿಯುವುದೇ ಇಲ್ಲ, ಕನ್ನಡ ಮಾತನಾಡುವುದೇ ಇಲ್ಲ ಎಂದು ಹೇಳಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟನೆಗೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ಇನ್ಫೋಸಿಸ್ನ ಮಾಜಿ ನಿರ್ದೇಶಕ ಟಿ ವಿ ಮೋಹನದಾಸ್ ಪೈ ಸ್ಥಳೀಯ ಭಾಷೆಯ 200 ಪದ ಕಲಿಯುವುದು ಅಷ್ಟೊಂದು ಕಷ್ಟವೇ ಎಂದು ಪ್ರಶ್ನಿಸಿದ್ದಾರೆ.
ಮ್ಯಾನೇಜರ್ ವರ್ತನೆ ಹಾಗೂ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು 'ಪ್ರತಿಯೊಂದು ವ್ಯವಹಾರವು ತನ್ನ ಸ್ಥಳೀಯ ಗ್ರಾಹಕರಿಗೆ ಅವರು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಸೇವೆ ಸಲ್ಲಿಸಬೇಕು. ಇದು ಮತ್ತೆ ಬ್ರಿಟಿಷ್ ರಾಜ್ಯವಲ್ಲ. ಇದು ಸೇವಾ ವ್ಯವಹಾರ' ಎಂದು ಹೇಳಿದ್ದಾರೆ.
ಈ ಪೋಸ್ಟ್ನಲ್ಲಿ ಅವರು ಬ್ಯಾಂಕ್ ಸಿಬ್ಬಂದಿಯನ್ನು ಯಾರೂ ಸ್ವಚ್ಛ ಕನ್ನಡ ಕಲಿಯಿರಿ ಅಥವಾ ಓದಲು, ಬರೆಯಲು ಕಲಿಯ...
Click here to read full article from source
To read the full article or to get the complete feed from this publication, please
Contact Us.