ಭಾರತ, ಮೇ 10 -- ಕನ್ನಡದ ಸಿನಿಮಾವೊಂದು ಚಿತ್ರಮಂದಿರಗಳಲ್ಲಿ ತೆರೆಕಂಡು ಸುದೀರ್ಘ 21 ತಿಂಗಳ ಬಳಿಕ ಒಟಿಟಿಗೆ ಆಗಮಿಸಿದೆ. ಪೊಲಿಟಿಕಲ್‌ ಥ್ರಿಲ್ಲರ್‌ ಜಾನರ್‌ನ ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ʻಬಯಲುಸೀಮೆʼ ಸಿನಿಮಾ ಇದೀಗ ಡಿಜಿಟಲ್‌ ಸ್ಟ್ರೀಮಿಂಗ್‌ಗೆ ಬಂದಿದೆ. ವರುಣ್ ಕಟ್ಟಿಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹೆಸರೇ ಸೂಚಿಸುವಂತೆ, ಇದೊಂದು ಪಕ್ಕಾ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಈ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟದಲ್ಲಿಯೂ ಈ ಕಥೆ ತೆರೆದುಕೊಳ್ಳಲಿದೆ.

ಇದೀಗ ಇದೇ ಸಿನಿಮಾ ಸುದೀರ್ಘ ದಿನಗಳ ಬಳಿಕ ಒಟಿಟಿಗೆ ಆಗಮಿಸಿದೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ವರುಣ್‌ ಕಟ್ಟಿಮನಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದರೆ, ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡ...