Bengaluru, ಮೇ 17 -- ಈ ವರ್ಷ ಕನ್ನಡದಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ಕನ್ನಡ ಸಿನಿಮಾಗಳಲ್ಲಿ ʻಅಜ್ಞಾತವಾಸಿʼಯೂ ಒಂದು. ಇದೀಗ ಇದೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ಅಧಿಕೃತವಾಗಿದೆ. ಯಾವುದೇ ನಿರೀಕ್ಷೆಗಳಿಲ್ಲದೆ ಸಣ್ಣ ಚಿತ್ರವಾಗಿ ತೆರೆಕಂಡ ಈ ಕ್ರೈಮ್ ಮಿಸ್ಟರಿ ಥ್ರಿಲ್ಲರ್ ಸಿನಿಮಾ, ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಒಂದೂವರೆ ತಿಂಗಳಿಗೆ ಡಿಜಿಟಲ್‌ ಸ್ಟ್ರೀಮಿಂಗ್‌ಗೆ ಆಗಮಿಸುತ್ತಿದೆ. ಈ ಸಿನಿಮಾದಲ್ಲಿ ರಂಗಾಯಣ ರಘು, ಪಾವನಾ ಗೌಡ, ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್‌ ಗೌಡ ಸೇರಿ ಇನ್ನೂ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇಪ್ಪತ್ತೈದು ವರ್ಷಗಳಿಂದ ಮಲೆನಾಡಿನ ನಾಲ್ಕೇರಿ ಗ್ರಾಮದಲ್ಲಿ ಒಂದೇ ಒಂದು ಅಪರಾಧ ನಡೆದಿಲ್ಲ. ಗೋವಿಂದು ಅವರನ್ನು ಪೊಲೀಸ್ ಅಧಿಕಾರಿಯಾಗಿ ಆ ಗ್ರಾಮಕ್ಕೆ ವರ್ಗಾಯಿಸಲಾಗುತ್ತದೆ. ಆ ಶಾಂತಿಯುತ ಹಳ್ಳಿಯಲ್ಲಿ, ನಡೆಯಬಾರದ್ದೊಂದು ನಡೆದುಬಿಡುತ್ತದೆ. ಗ್ರಾಮದ ಮುಖ್ಯಸ್ಥ ಶ್ರೀನಿವಾಸಯ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತದೆ. ಗೋವಿಂದು ಈ ಪ್ರಕರಣವನ್ನು ಸವಾಲಾಗಿ ತೆ...