ಭಾರತ, ಮಾರ್ಚ್ 13 -- ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್‌ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ವಿಚಾರಣಾ ಆಯೋಗ ಬುಧವಾರ (ಮಾರ್ಚ್‌ 12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದೆ. ಇದರ ಬೆನ್ನಿಗೆ ಬೆಂಗಳೂರಿನ ಅಂಡರ್ ಪಾಸ್‌ ರಸ್ತೆಯ ಗೋಡೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಜತೆಗೆ 60 ಪರ್ಸೆಂಟ್ ಕಮಿಷನ್ ಭಿತ್ತಿ ಚಿತ್ರದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ 40 ಪರ್ಸೆಂಟ್ ಕಮಿಷ್ ಆರೋಪ ಮಾಡಿತ್ತು. ಇದನ್ನೇ ಕಾಂಗ್ರೆಸ್ ನಾಯಕರು ಪ್ರಚಾರ ಅಭಿಯಾನಕ್ಕೂ ಬಳಸಿಕೊಂಡು, ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದರು. ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪಗಳ ತನಿಖೆಗಾಗಿ ನ್ಯಾ. ಎಚ್.ಎನ್.ನಾಗಮೋಹನ ದಾಸ್ ನೇತೃತ್ವದ ವಿಚಾರಣಾ ಆಯೋಗವನ್ನು ರಚಿಸಿದ್ದರು. ಈ ಆಯೋಗ ಬುಧವಾರ 40 ಪರ್ಸೆಂಟ್ ಕಮಿಷನ್‌ ಆರೋಪಗಳ ತನಿಖ...