ಭಾರತ, ಮಾರ್ಚ್ 29 -- ಎಂ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್ಗಳ ಭರ್ಜರಿ ಗೆಲುವು ದಾಖಲಿಸಿತು. ಇದರೊಂದಿಗೆ ಚೆಪಾಕ್ನಲ್ಲಿ 17 ವರ್ಷಗಳ ನಂತರ ಗೆಲುವಿನ ನಗೆ ಬೀರಿದೆ. 6155 ದಿನಗಳ ಬಳಿಕ ಚೆನ್ನೈನಲ್ಲಿ ಗೆದ್ದಿರುವ ಆರ್ಸಿಬಿ, ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಭದ್ರಪಡಿಸಿಕೊಂಡಿದೆ. ಆದರೆ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಎಂಎಸ್ ಧೋನಿ ಕಣಕ್ಕಿಳಿದಿದ್ದು ಸಿಕ್ಕಾಪಟ್ಟೆ ಚರ್ಚೆಗೆ ಗುರಿಯಾಗಿದೆ. ಅದರಲ್ಲೂ ಸಿಎಸ್ಕೆ ಪರ ಆಡಿದ್ದ ಮಾಜಿ ಕ್ರಿಕೆಟರ್ಗಳೇ ಧೋನಿ ನಡೆಗೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.
ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ನೇತೃತ್ವದ ಸೂಪರ್ ಕಿಂಗ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಬೆಂಗಳೂರು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ರಜತ್ ಪಾಟೀದಾರ್ ಅಬ್ಬರದ ಅರ್ಧಶತಕ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಮತ್ತೊ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.