ಭಾರತ, ಫೆಬ್ರವರಿ 12 -- ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಮಂಗಳೂರು ಹೊರವಲಯದ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು,ಅಲ್ಲಿ ಜಾರಂದಾಯ ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ನೋಡಿದ್ದಾರೆ. ಇತ್ತೀಚೆಗೆ ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು,ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದು ಅದಕ್ಕೆ ವಿಶಾಲ್ ಅವರು ಒಪ್ಪಿದ್ದಾರೆ.
ತಮಿಳು ಸೂಪರ್ ಸ್ಟಾರ್ ವಿಶಾಲ್ ಅವರು ಇತ್ತೀಚೆಗೆ ಅನಾರೋಗ್ಯ ಬಳಲುತ್ತಿಸದ್ದರು. ಸಿನಿಮಾ ಪ್ರಚಾರದ ಸಂದರ್ಭದಲ್ಲೂ ಅವರ ಕೈ ನಡುಗಿ ವೇದಿಕೆಯಲ್ಲೇ ಎಲ್ಲರಿಗೂ ಆತಂಕ ಉಂಟಾಗಿತ್ತು. ಅವರ ಮುಖದಲ್ಲೂ ಸಾಕಷ್ಟು ಬದಲಾವಣೆಯಾಗಿದೆ ಎಂದು ಚರ್ಚೆಯಾಗುತ್ತಲೆ ಇತ್ತು. ಅದೇ ರೀತಿ ಅವರು ತಮ್ಮ ಆರೋಗ್ಯದ ಬಗ್ಗೆ ದೈವದ ಬಳಿ ಬೇಡಿಕೊಳ್ಳಲು ಬಂದ ವಿಚಾರ ಹೊರಬಂದಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.