ಭಾರತ, ಜನವರಿ 25 -- ಕನ್ನಡದ ಹಿರಿಯ ನಟ ಅನಂತ್‌ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

1973ರಲ್ಲಿ ಸಂಕಲ್ಪ ಸಿನಿಮಾದಿಂದ ಶುರುವಾದ ಅನಂತ್‌ನಾಗ್‌ ಅವರ ಜರ್ನಿ, ಅಲ್ಲಿಂದ ಹಂಸಗೀತೆ, ಬಯಲುದಾರಿ, ನಾ ನಿನ್ನ ಬಿಡಲಾರೆ, ಚಂದನದ ಗೊಂಬೆ, ಮಿಂಚಿನ ಓಟ, ನಾರದ ವಿಜಯ, ಅನುಪಮಾ, ಮುಳ್ಳಿನ ಗುಲಾಬಿ, ಬೆಂಕಿಯ ಬಲೆ, ಒಲವು ಮೂಡಿದಾಗ, ಅರುಣ ರಾಗ, ಹೆಂಡ್ತಿಗೆ ಹೇಳ್ಬೇಡಿ, ಗಗನ, ಗೌರಿ ಗಣೇಶ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅನಂತ್‌ನಾಗ್‌ ನಾಯಕನ ಪಾತ್ರದಲ್ಲಿ ನಟಿಸಿದರೆ, ಮುಂಗಾರು ಮಳೆ, ಈ ಬಂಧನ, ಅರಮನೆ, ಗಣೇಶ ಮತ್ತೆ ಬಂದ, ಮೈನಾ, ಗೂಗ್ಲಿ, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆಜಿಎಫ್‌, ಗಾಳಿಪಟ 2 ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಯಾವುದೇ ಪ...