Bagalkot, ಮೇ 6 -- ಬಾಗಲಕೋಟೆ: ಮೊದಲ ಹಂತದ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿತ್ತು.ಈಗ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣೆಗೆ ಹೊರಟಿದ್ದ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮುಧೋಳ ಬಸ್‌ ನಿಲ್ದಾಣಕ್ಕೆ ಬಂದು ಮತದಾನ ಕಾರ್ಯಕ್ಕೆ ಹೊರಡಬೇಕಾಗಿದ್ದ ವೇಳೆ ಈ ಘಟನೆ ನಡೆದಿದೆ. ಏಕಾಏಕಿ ಕುಸಿದು ಬಿದ್ದ ಅವರನ್ನು ಅಲ್ಲಿದ್ದವರು ಆರೈಕೆ ಮಾಡಿದರು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮುಧೋಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕಟಿಸಿದರು.

ಮುಧೋಳ ತಾಲ್ಲೂಕಿನ ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಗೋವಿಂದಪ್ಪ ಸಿದ್ದಾಪುರ ಅವರು ಮುಧೋಳ ಪಟ್ಟಣದಲ್ಲಿಯೇ ನೆಲೆಸಿದ್ದಾರೆ. ಅವರಿಗೆ ಈ ಬಾರಿ ಚುನಾವಣೆಯ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಲಾಗಿತ್ತು. ಈಗಾಗಲೇ ತರಬೇತಿಗಳಲ್ಲೂ ಅವರು ಭಾಗಿಯಾಗಿದ್ದರು. ಅವರಿಗೆ ಮುಧೋಳ ಪಕ್ಕದ ಜಮಖಂಡಿ ಮತ ...