Ballari, ಏಪ್ರಿಲ್ 15 -- Ballari News:ನಾಲ್ಕು ತಿಂಗಳ ಹಿಂದೆ ಸಕ್ಕರೆಯ ನಾಡು ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ನೆನಪುಗಳು ಮಾಸಿಲ್ಲ. ಆಗಲೇ ಮತ್ತೊಂದು ಸಾಹಿತ್ಯ ಕನ್ನಡವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತು ಅಣಿಯಾಗುತ್ತಿದೆ. ಈ ಬಾರಿ ಸಾಹಿತ್ಯ ಸಮ್ಮೇಳನವು ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆಯಲಿದೆ. ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರಿಗೆ ಮತ್ತು ಸಾಹಿತ್ಯ ಪ್ರೇಮಿಗಳಿಗೆ ಹಬ್ಬ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ. ಮುಖ್ಯವಾಗಿ ಸಮ್ಮೇಳನಗಳಲ್ಲಿ ಕನ್ನಡ ನಾಡು ನುಡಿಗೆ, ಭಾಷೆ ಬೆಳವಣಿಗೆ, ಗಡಿ ಭಾಗದ ಶಾಲಾ ವಿಚಾರಗಳ ಸಂಬಂಧಿಸಿ ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಮುಂದಿಡಲಾಗುತ್ತದೆ. ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನ...