Bangalore, ಮಾರ್ಚ್ 27 -- Bangalore News: ಬೆಂಗಳೂರಿನಲ್ಲಿ ಇರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ 2 ಜಿಲ್ಲಾ ನೊಂದಣಿ ಕಚೇರಿ ಹಾಗೂ 34 ಉಪನೋಂದಣಿ ಕಚೇರಿಗಳನ್ನು ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲು ಬೇಕಾದ ಆರ್ಥಿಕ ಅನುದಾನಕ್ಕೆ ಕರ್ನಾಟಕ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಬಿಬಿಎಂಪಿ/ಬೆಂಗಳೂರು ನಗರ ಜಿಲ್ಲಾಧಿಕಾರಿ/ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗಳಿಂದ ಹಂಚಿಕೆಯಾಗುವ ನಿವೇಶನದಲ್ಲಿ ತಲಾ ಒಂದು ಕಟ್ಟಡವನ್ನು ಗರಿಷ್ಠ ರೂ.2.50 ಕೋಟಿಗಳ ವೆಚ್ಚದಲ್ಲಿ ಹೊಸದಾಗಿ ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇಲ್ಲವೇ ನಿವೇಶನ ಲಭ್ಯವಾಗದಿದ್ದಲ್ಲಿ ಬಿಬಿಎಂಪಿ/ಬೆಂಗಳೂರು ನಗರ ಜಿಲ್ಲಾಧಿಕಾರಿ / ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗಳು ಹೊಂದಿರುವ ಕಟ್ಟಡಗಳಲ್ಲಿ ಸ್ಥಳಾವಕಾಶ ಲಭ್ಯವಾದಲ್ಲಿ ಕಚೇರಿಗಳನ್ನು ಸ್ಥಳಾಂತರಿಸಬಹುದು. ತಲಾ ಒಂದು ಕಛೇರಿಗಳನ್ನು ಗರಿಷ್ಠ ರೂ.50.00 ಲಕ್ಷಗಳ ವೆಚ್ಚದಲ್ಲಿ ನವೀಕರಿಸಲು ಅಥವಾ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡದ ಮೇಲೆ ಮತ್ತೊಂದು ಮಹಡಿಯನ್ನು ನಿರ್ಮಿಸಲು ತಗಲುವ ವಾಸ್ತವಿಕ ವೆಚ್ಚ...
Click here to read full article from source
To read the full article or to get the complete feed from this publication, please
Contact Us.