ಭಾರತ, ನವೆಂಬರ್ 24 -- ಬೆಂಗಳೂರು: ರಾಜಧಾನಿಯಲ್ಲಿ ನಡೆದ ಘಟನೆಯೊಂದು ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ಹಣಕಾಸಿನ ವಿಚಾರವಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ರಾಜಶೇಖರ್ ಎಂಬ ವ್ಯಕ್ತಿ ಮೃತದೇಹವನ್ನು ಕಾರಿನಲ್ಲಿ ಪೊಲೀಸ್​ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ.

ಕಾರ್ ಮೆಕ್ಯಾನಿಕ್ ಆಗಿರುವ ಆರೋಪಿ ರಾಜಶೇಖರ್ ಜಯಂತಿ ನಗರದ ನಿವಾಸಿಯಾಗಿದ್ದು, ಮೃತನನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಿಮ್ಮನಹುಂಡಿ ನಿವಾಸಿ ಮಹೇಶಪ್ಪ (45) ಎಂದು ಗುರುತಿಸಲಾಗಿದೆ.

ಮಹೇಶಪ್ಪ ಮಹಿಳಾ ಸೊಸೈಟಿ ಸೇರಿದಂತೆ‌ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಹಲವು ಯೋಜನೆಯಡಿ ಸಾಲ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ. ಇದರಿಂದ ಹಣ ಕಳೆದುಕೊಂಡಿದ್ದ ರಾಜಶೇಖರ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿರುವ ರಾಜಶೇಖರ್​, ಮೊನ್ನೆ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮಹೇಶಪ್ಪನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದೆ. ಆತ ಕಾರಿನ ಹಿಂಬದಿ ಸೀಟಿನಲ್ಲಿದ್ದ. ಆವಲಹಳ್ಳಿಯ ರೆಸ್ಟೋರೆಂ...