Mandya, ಮಾರ್ಚ್ 5 -- Bird Flu in Karnataka: ಕರ್ನಾಟಕದ ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು ಭಾಗದಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ನಂತರ ಪಶುಪಾಲನಾ ಇಲಾಖೆ ಅಲರ್ಟ್ ಆಗಿದೆ. ಕರ್ನಾಟದಲ್ಲಿಯೇ ಅತೀ ಹೆಚ್ಚು ವಿದೇಶಿ ಹಕ್ಕಿಗಳು ಆಗಮಿಸುವ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕಾವೇರಿ ತೀರದ ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲೂ ತಪಾಸಣೆ ನಡೆಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯಾವುದೇ ವಿದೇಶಿ ಹಕ್ಕಿಗಳು ಸಾಯುವುದು ಇಲ್ಲವೇ ಅನಾರೋಗ್ಯಕ್ಕೆ ಒಳಗಾಗುವಂತಹ ವಾತಾವರಣ ಕಂಡು ಬಂದಿಲ್ಲ. ಪಶುಪಾಲನಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಂಗನತಿಟ್ಟು ಪಕ್ಷಿಧಾಮದಲ್ಲಿ ಒಂದು ಸುತ್ತು ಹಾಕಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ವಿದೇಶಿ ಹಕ್ಕಿಗಳ ಸಂಖ್ಯೆ ರಂಗನತಿಟ್ಟಿನಲ್ಲಿ ಕಡಿಮೆಯಾಗಿವೆ. ಸದ್ಯಕ್ಕೆ ಯಾವುದೇ ಆತಂಕ ಪಡುವ ಅಗತ್ಯವೂ ಇಲ್ಲ ಎನ್ನುವುದು ತಪಾಸಣೆ ವೇಳೆ ತಿಳಿದು ಬಂದಿದೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.