ಭಾರತ, ನವೆಂಬರ್ 29 -- ಬೆಂಗಳೂರು: ನಗರದ ಕಾರ್ಯಕ್ರಮವೊಂದರಲ್ಲಿ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ಬಿಜೆಪಿಯ ಪ್ರಮುಖ ನಾಯಕರು ವೇದಿಕೆೆ ಹಂಚಿಕೊಂಡಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.

ಚಾಮರಾಜಪೇಟೆಯಲ್ಲಿ ರಾಜ್ಯ ಕೂಲಿ ಕಾರ್ಮಿಕರ ಹಾಗೂ ಆಟೋ ಚಾಲಕರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ಕಳೆದ ಭಾನುವಾರ ಅಪ್ಪು ನಮನ ಮತ್ತು ರಕ್ತದಾನ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಈ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ ಹಾಗೂ ಪಿಸಿ ಮೋಹನ್ ಅವರು ಸುನೀಲ್ ಪಕ್ಕದಲ್ಲಿ ಕುಳಿತಿದ್ದಾರೆ. ಹೀಗಾಗಿ ಸುನೀಲ್ ಬಿಜೆಪಿ ಸೇರುತ್ತಾನೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ...