ಭಾರತ, ನವೆಂಬರ್ 27 -- ಬೆಂಗಳೂರು: ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿರುವ ವಿಡಿಯೋವನ್ನು ಕೆಲ ಮಾಧ್ಯಮಗಳು ಬಿತ್ತರಿಸಿವೆ. ಇದೇ ವಿಚಾರವನ್ನು ಮುಂದಿಟ್ಟಿರುವ ರಾಜ್ಯ ಬಿಜೆಪಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು, ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ ಎಂದಿದೆ.

ಮತ್ತೊಂದು ಟ್ವೀಟ್ ನಲ್ಲಿ, ಈ ದೇಶದಲ್ಲಿ ಎಲ್ಲ ಧರ್ಮೀಯರು ಮುಕ್ತ ಮನಸಿನಿಂದ ಒಪ್ಪಿಕೊಂಡಿರುವ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವುದು ಅವರ ಜಿಹಾದಿ ಮನಸ್ಥಿತಿ ತೋರಿಸುತ್ತದೆ. ಬ್ರಿಟಿಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದರು, ಈಗ ಅದೇ ಸಾಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ ಎಂದು ಕಿಡಿಕಾರಿದೆ.

ಮಾನ್...