ಭಾರತ, ಫೆಬ್ರವರಿ 23 -- ಹಾಸನ: ಹಾಸನ ನಗರದ ಹೊರ ವಲಯದಲ್ಲಿ ಖಾಸಗಿ ಬಸ್‌ ಭಾನುವಾರ ಬೆಳಿಗಿನ ಜಾವ ಡಿಕ್ಕಿ ಹೊಡೆದ ಪರಿಣಾಮವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಇಬ್ಬರು ಭಕ್ತರು ಮೃತಪಟ್ಟಿದ್ದು, ಇನ್ನೊಬ್ಬ ಭಕ್ತನ ಸ್ಥಿತಿ ಗಂಭೀರವಾಗಿದೆ.ಗಂಭೀರವಾಗಿದೆ. ಮಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ಖಾಸಗಿ ಟ್ರಾವೆಲ್ಸ್‌ ಬಸ್‌ ಪಾದಯಾತ್ರಿಗಳ ಮೇಲೆ ಹರಿದಿದೆ. ಹಾಸನ ನಗರದ ಹೊರ ವಲಯದ ಎಚ್‌ ಕೆಎಸ್‌ ಇಂಟರನ್ಯಾಷನಲ್‌ ಶಾಲೆ ಬಳಿ ಘಟನೆ ನಡೆದಿದ್ದು, ಆತಂಕಗೊಂಡ ಬಸ್‌ ಚಾಲಕ ಪ್ರಯಾಣಿಕರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಹಾಸನ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಬಸ್‌ ಜಪ್ತಿ ಮಾಡಿದ್ದಾರೆ. ಚೆನ್ನೈಗೆ ಹೋಗಬೇಕಿದ್ದ ಪ್ರಯಾಣಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

Published by HT Digital Content Services with permission from HT Kannada....