ಭಾರತ, ನವೆಂಬರ್ 29 -- ನವದೆಹಲಿ: ಬೆಂಗಳೂರಿನಲ್ಲಿ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿರುವ ಸಂಬಂಧ ಕಾಂಗ್ರೆಸ್ ನಾಯಕರು ಸರಣಿ ಟ್ವೀಟ್ ಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದೇ ವಿಚಾರ ಸಂಬಂಧ ಇಂದು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ತಿರುಗೇಟು ನೀಡಿದರು.

ಚಾಮರಾಜಪೇಟೆಯಲ್ಲಿ ರಾಜ್ಯ ಕೂಲಿ ಕಾರ್ಮಿಕರ ಹಾಗೂ ಆಟೋ ಚಾಲಕರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ಕಳೆದ ಭಾನುವಾರ ಅಪ್ಪು ನಮನ ಮತ್ತು ರಕ್ತದಾನ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಈ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ ಹಾಗೂ ಪಿಸಿ ಮೋಹನ್ ಅವರು ಸುನೀಲ್ ಪಕ್ಕದಲ್ಲಿ ಕುಳಿತಿದ್ದಾರೆ. ಹೀಗಾಗಿ ಸುನೀಲ್ ಬಿಜೆಪಿ ಸೇರುತ್ತಾನೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ...