Bangalore, ಮೇ 24 -- ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಜತೆಗೆ ಚಳಿಯ ವಾತಾವರಣವೂ ಅಧಿಕವಾಗುತ್ತಿರುವ ನಡುವೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಬೆಂಗಳೂರು ಸಹಿತ ನಾನಾ ಭಾಗಗಳಲ್ಲಿ ಕೋವಿಡ್‌ ಪ್ರಕರಣ ವರದಿಯಾಗುತ್ತಿವೆ. ಇದರಿಂದ ಎಚ್ಚೆತ್ತಿರುವ ಕರ್ನಾಟಕ ಆರೋಗ್ಯ ಇಲಾಖೆಯ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಕರ್ನಾಟಕ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ಮೇ 25ರ ಭಾನುವಾರದಿಂದಲೇ ಪರೀಕ್ಷೆ ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು ಉಸಿರಾಟ ಸಮಸ್ಯೆಯಿಂದ ಬಳುತ್ತಿರುವವರು ಆಸ್ಪತ್ರೆಗೆ ಬಂದಾಗ ಅವರಿಗೆ ಕೋವಿಡ್‌ತಪಾಸಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರು,ಬೆಳಗಾವಿ ಸಹಿತ ಕೆಲವು ಕಡೆಗಳಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ.ಆರೋಗ್ಯ ಇಲಾಖೆಯಲ್ಲಿ ಲಭ್...