Dakshina Kannada, ಮಾರ್ಚ್ 5 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲಮೂಡ್ನೂರು ಗ್ರಾಮದ ಮಾಡತ್ತಡ್ಕದಲ್ಲಿ ಕಲ್ಲು ಕ್ವಾರಿಯೊಂದರಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಫೋಟಗೊಂಡು ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿವೆ. ಈ ಸಂಬಂಧ ಎಸ್ಪಿ ಯತೀಶ್ ಸೂಚನೆಯಂತೆ ಕೋರೆಯ ಮ್ಯಾನೇಜರ್ನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಫೋಟಕವನ್ನು ಸ್ಥಳದಲ್ಲಿ ತಂದಿಟ್ಟವರನ್ನು ಹಾಗೂ ಸ್ಫೋಟಕ ತಂದ ವಾಹನವನ್ನು ವಶಕ್ಕೆ ಪಡೆದುಕೊಳ್ಳುವಂತೆ ಪೊಲೀಸ್ ಎಸ್ಪಿ ಸೂಚಿಸಿದ ಮೇರೆಗೆ ಈ ಕ್ರಮ ನಡೆದಿದೆ. ಮಂಗಳವಾರ ಮಾಡತ್ತಡ್ಕದ ಕೋರೆಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಪೋಟಗೊಂಡಿದ್ದು ವಿಟ್ಲ ಪೇಟೆ ಸೇರಿ ಆಸುಪಾಸಿನ ಜನರನ್ನು ಬೆಚ್ಚಿಬೀಳಿಸಿತ್ತು. ಸುಮಾರು 4 ಕಿ.ಮೀ. ವ್ಯಾಪ್ತಿಯಲ್ಲಿ ಮನೆಗಳಿಗೆ ಹಾನಿಯಾಗಿದ್ದು ನೂರು ಮೀಟರು ದೂರದಲ್ಲಿರುವ ಎರಡು ಮನೆಗಳ ಭಾವಣೆ, ಕಿಟಕಿ ಸೇರಿ ಹಲವು ವಸ್ತುಗಳು ಜಖಂಗೊಂಡಿವೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.