ಭಾರತ, ನವೆಂಬರ್ 28 -- ನವದೆಹಲಿ: ಶ್ರದ್ಧಾ ವಾಕರ್ ಹತ್ಯೆಯಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಗನೊಂದಿಗೆ ಸೇರಿಕೊಂಡು ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದು, ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಘಟನೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ನಡೆದಿದೆ.

ಈ ಘಟನೆ ಕೂಡ ಕಳೆದ ಮೇ ತಿಂಗಳಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅಂಜನ್ ದಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಅಂಜನ್ ದಾಸ್ ಪೂನಂ ಮತ್ತು ಮಗ ದೀಪಕ್ ಎಂದು ಗುರುತಿಸಲಾಗಿದೆ. ದೇಹದ ಭಾಗಗಳನ್ನು ತಾಯಿ-ಮಗ ವಿಲೇವಾರಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂಜನ್ ದಾಸ್ ಅವರನ್ನು ಮೇ 30 ರಂದು ಕೊಲ್ಲಲಾಗಿದ್ದು, ಜೂನ್ 5 ರಂದು ಪೂರ್ವ ದೆಹಲಿಯ ಕಲ್ಯಾಣಪುರಿಯಲ್ಲಿರುವ ರಾಮಲೀಲಾ ಮೈದಾನದಲ್ಲಿ ಮೃತದೇಹದ ಆರು ಭಾಗಗಳು ಪೊಲೀಸರಿಗೆ ಸಿಕ್ಕಿತ್ತು. ದಾಸ್ ತನ್ನ ಮಲಮಗಳು ಮತ್ತು ಮಲಮಗನ ಹೆಂಡತಿಯ ಮೇಲೆ ಕಣ್ಣಿಟ್ಟಿದ್ದಾನೆ ಎಂಬ ಅನುಮಾನದ ಮೇಲೆ ಇವರಿಬ್ಬರು ದಾಸ್ ಅವರ...