ಭಾರತ, ಮಾರ್ಚ್ 31 -- ಬೆಂಗಳೂರು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಬಲಗೈಗೆ ಕಪ್ಪು ಪಟ್ಟಿ ಧರಿಸಿ ಈದ್ಗಾ ಪ್ರಾರ್ಥನೆ ನಡೆಸಿದರು. ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಅವರ ಪುತ್ರ ಕೂಡ ಪ್ರಾರ್ಥನೆಯಲ್ಲಿ ಭಾಗಿಯಾದರು.

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಈ ರೀತಿ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ವಕ್ಫ್‌ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ, ವಕ್ಫ್ ಮಂಡಳಿ ತನಗೆ ಬೇಕಾದ ಜಮೀನು ತನ್ನದು ಎಂದು ಹೇಳುವ ಅದರ ಅಧಿಕಾರ ಮೊಟಕುಗೊಳ್ಳಲಿದೆ. ಈಗಾಗಲೇ ರೈತರ ಜಮೀನು ಹಾಗೂ ಪುರಾತ್ತತ್ವ ಸವೇಕ್ಷಣಾ ಇಲಾಖೆ ಜಮೀನು, ಸರ್ಕಾರಿ ಜಮೀನು ವಕ್ಫ್ ಅಧೀನಕ್ಕೆ ಹೋಗಿರುವ ಬಗ್ಗೆ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಹೀಗಾಗಿ ಕೇಂದ್ರ ಸರ್ಕಾರ ವಕ್ಫ್‌ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಇದಕ್ಕೆ ಈಗ ಮುಸಲ್ಮಾನರು ವಿರೋಧ ವ್ಯಕ್ತಪಡಿಸಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ವೇಳೆ ಸಚಿವ ಜಮೀರ್ ಅಹ್ಮದ್ ಅವರ ಪುತ್ರ ಜ...