ಬೆಂಗಳೂರು, ಮಾರ್ಚ್ 23 -- ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ 18ನೇ ಆವೃತ್ತಿಯ ಐಪಿಎಲ್ಗೆ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಭರ್ಜರಿ 7 ವಿಕೆಟ್ಗಳ ಗೆಲುವು ದಾಖಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, 2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಭಿಯಾನ ಆರಂಭಿಸಿದೆ. ಕೆಕೆಆರ್ ನೀಡಿದ್ದ 175 ರನ್ಗಳ ಸ್ಪರ್ಧಾತ್ಮಕ ಮೊತ್ತವನ್ನು ಚೇಸ್ ಮಾಡಿದ ಆರ್ಸಿಬಿ, 22 ಎಸೆತಗಳು ಬಾಕಿ ಇರುವಂತೆ ಗೆಲುವಿನ ಕೇಕೆ ಹಾಕಿತು. ಆದರೆ ಈ ಪಂದ್ಯದಲ್ಲಿನ ಹಿಟ್ ವಿಕೆಟ್ ವಿವಾದ ಹೆಚ್ಚು ಸದ್ದು ಮಾಡುತ್ತಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಕೆಕೆಆರ್ ಇನ್ನಿಂಗ್ಸ್ ಆರಂಭಿಸಿತು. ಇನ್ನಿಂಗ್ಸ್ ಮೊದಲ ಓವರ್ನಲ್ಲೇ ಕ್ವಿಂಟನ್ ಡಿ ಕಾಕ್ರನ್ನ ಕಳೆದುಕೊಂಡ ಕೆಕೆಆರ್ಗೆ ಅಜಿಂಕ್ಯ ರಹಾನೆ ಮತ್ತು ಸುನಿಲ್ ನರೈನ್ ಬಿರುಸಿನ ಆಟದ ಮೂಲಕ ಆಸರೆಯಾದರು. 7ನೇ ಓವರ್ ಆಗಿದ್ದಾಗ ವಿವಾದವೊಂದು ಸೃಷ್ಟಿಯಾಯಿತು. ಈ ಓವರ್ನ 4ನೇ ...
Click here to read full article from source
To read the full article or to get the complete feed from this publication, please
Contact Us.