ಭಾರತ, ಮಾರ್ಚ್ 20 -- Honeytrap Karnataka: ಕರ್ನಾಟಕ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರ ಇಂದು ಗಂಭೀರ ಚರ್ಚೆಗೆ ಒಳಗಾಯಿತು. ಬಿಜೆಪಿ ಶಾಸಕ ವಿಜಯಪುರದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನಿಟ್ರ್ಯಾಪ್ ವಿಚಾರ ಪ್ರಸ್ತಾಪಿಸಿದ್ದು, ಸಚಿವ ಕೆಎನ್‌ ರಾಜಣ್ಣ ಅವರ ಹೆಸರನ್ನು ಉಲ್ಲೇಖಿಸಿದರು. ಹೀಗಾಗಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ವಿದಾನಸಭೆ ಕಲಾಪದಲ್ಲಿ ಈ ಬಗ್ಗೆ ಸ್ಪಷ್ಟೀಕರಣ ನೀಡುತ್ತ, ರಾಷ್ಟ್ರೀಯ ನಾಯಕರು ಸೇರಿ 48 ರಾಜಕಾರಣಿಗಳು ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ. ನನ್ನ ಮೇಲೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿ ಲಿಖಿತ ದೂರು ದಾಖಲಿಸುವೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಆಗ್ರಹಿಸಿದರು.

ಕರ್ನಾಟಕ ಬಜೆಟ್‌ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ವಿಜಯಪುರ ಶಾಸಕ, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸುವ ಎರಡು ಪ್ರಯತ್ನ ನಡೆದಿದೆ. ಹನಿಟ್ರ್ಯಾಪ್ ಬಲೆಗೆ ಬಿದ್ದವರನ್ನು ಬ್ಲ್ಯಾಕ್‌ಮೇಲ್ ಮಾಡುವುದ...