ಭಾರತ, ಏಪ್ರಿಲ್ 22 -- ಬೆಂಗಳೂರು ಹಾಗೂ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದಿಂದ ಸಂಚರಿಸುತ್ತಿದ್ದ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಯಥಾರೀತಿಯಾಗಿ ಆರಂಭಿಸಲಾಗುತ್ತಿದೆ. ಚೆನ್ನೈ ವಿಭಾಗದಲ್ಲಿ ಸುರಕ್ಷತೆ ಮತ್ತು ನಿರ್ವಹಣಾ ಕಾರ್ಯಗಳಿಂದಾಗಿ ಈ ಹಿಂದೆ ಭಾಗಶಃ ರದ್ದಾದ ರೈಲು ಸೇವೆಗಳನ್ನು ಪುನಃಸ್ಥಾಪನೆ ಮಾಡುವುದಾಗಿ ದಕ್ಷಿಣ ರೈಲ್ವೆ ತಿಳಿಸಿದೆ. ಈ ರೈಲುಗಳು ಈಗ ಅವುಗಳ ಮೂಲ ವೇಳಾಪಟ್ಟಿಯ ಪ್ರಕಾರ ಚಲಿಸುತ್ತವೆ. ಬೇಸಿಗೆ ರಜೆ ಸೇರಿದಂತೆ ನಾನಾ ಕಾರಣಗಳಿಂದ ಮೈಸೂರು ಹಾಗೂ ಬೆಂಗಳೂರು ಭಾಗದಿಂದ ತಮಿಳುನಾಡು ಹಾಗೂ ಚೆನ್ನೈ ಕಡೆಗೆ ಸಂಚರಿಸುವವರು ಈ ಸಮಯವನ್ನು ಗಮನಿಸುವಂತೆ ಹುಬ್ಬಳ್ಳಿ ನೈಋತ್ಯ ರೈಲ್ವೆ, ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1. ರೈಲು ಸಂಖ್ಯೆ 16552 ಅಶೋಕಪುರಂ - ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್ಪ್ರೆಸ್ .2025ರ ಏಪ್ರಿಲ್ 23 ಮತ್ತು ಏಪ್ರಿಲ್ 25 ರಂದು ಪ್ರಾರಂಭವಾಗುವ ಪ್ರಯಾಣವನ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.