Bangalore, ಮಾರ್ಚ್ 8 -- Indian Railways: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರೊಟ್ಟಗೆ ಎಸ್ಎಂವಿಟಿ ಬೆಂಗಳೂರು-ಗೋರಖ್ಪುರ ನಿಲ್ದಾಣಗಳ ನಡುವೆ ಎರಡು ಟ್ರಿಪ್ಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ಅನುಮತಿ ನೀಡಲಾಗಿದೆ. ಇದಲ್ಲದೇ ಮೈಸೂರು ಮತ್ತು ಭಗತ್-ಕಿ-ಕೋಥಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ಗಳಿಗೆ ವಿಶೇಷ ರೈಲುಗಳು ಹೋಳಿ ವೇಳೆಯೇ ಓಡಲಿವೆ. ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ ನಿಲ್ದಾಣಗಳ ನಡುವೆಯೂ ವಿಶೇಷ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.