Mysuru, ಮಾರ್ಚ್ 29 -- ಕೆಲIPS Posting: ಮೈಸೂರು ನಗರದ ಸಂಚಾರ, ಅಪರಾಧ ಹಾಗು ಸಿಬ್ಬಂದಿ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಎಸ್.ಜಾಹ್ನವಿ ಅವರನ್ನು ವರ್ಗ ಮಾಡಲಾಗಿದೆ. ಶನಿವಾರ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಆದೇಶವನ್ನು ಹೊರಡಿಸಿದ್ದು, ಜಾಹ್ನವಿ ಅವರಿಗೆ ಯಾವುದೇ ಹುದ್ದೆ ನೀಡದೇ ವರ್ಗ ಮಾಡಲಾಗಿದೆ. ಅವರು ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲಿ ವರದಿ ಮಾಡಿಕೊಂಡ ನಂತರ ಅವರಿಗೆ ಹುದ್ದೆ ನಿಯೋಜನೆ ಮಾಡುವ ನಿರೀಕ್ಷೆಯಿದೆ. ಒಂದೂವರೆ ವರ್ಷದಿಂದ ಮೈಸೂರು ನಗರದ ಉಪ ಆಯುಕ್ತರಾಗಿದ್ದ ಜಾಹ್ನವಿ ಅವರ ಜಾಗಕ್ಕೆ ಕೊಡಗಿನಲ್ಲಿ ಹೆಚ್ಚುವರಿ ಎಸ್ಪಿಯಾಗಿದ್ದ ಸುಂದರರಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಎಸ್. ಜಾಹ್ನವಿ 2008 ರ ಬ್ಯಾಚ್ನ ಕರ್ನಾಟಕ ರಾಜ್ಯ ಪೊಲೀಸ್ ಸೇವಾ ಅಧಿಕಾರಿಯಾಗಿದ್ದು, ಈ ಹಿಂದೆ ಬೆಂಗಳೂರು, ಕಲಬುರಗಿ ಮತ್ತು ಕೋಲಾರದಲ್ಲಿ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್), ಅಪರ...
Click here to read full article from source
To read the full article or to get the complete feed from this publication, please
Contact Us.