Bangalore, ಏಪ್ರಿಲ್ 6 -- Karnataka Lorry Strike: ಆರು ದಿನದ ಹಿಂದೆಯೇ ಕರ್ನಾಟಕ ಸರ್ಕಾರವು ಪ್ರತಿ ಲೀಟರ್ಗೆ ಎರಡು ರೂಪಾಯಿಯಷ್ಟು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಕರ್ನಾಟಕ ಲಾರಿ ಮಾಲೀಕರ ಸಂಘ ಬಲವಾಗಿ ವಿರೋಧ ವ್ಯಕ್ತಪಡಿಸಿದೆ. ದರ ಏರಿಕೆಯನ್ನು ವಿರೋಧಿಸಿ ಲಾರಿ ಮಾಲೀಕರ ಸಂಘ ಏಪ್ರಿಲ್ 14 ರಿಂದ ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಮುಂದಾಗಿದೆ. ಈ ಪ್ರತಿಭಟನೆಯಿಂದ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳಾದ ದಿನಸಿ, ತರಕಾರಿ, ಹಣ್ಣುಗಳ ಸಹಿತ ವಿವಿಧ ಸರಬರಾಜಿನಲ್ಲಿ ಭಾರೀ ವ್ಯತ್ಯಯವಾಗುವ ನಿರೀಕ್ಷೆಯಿದೆ. ಸರ್ಕಾರದ ಪ್ರತಿಕ್ರಿಯೆ ನೋಡಿಕೊಂಡು ಮುಷ್ಕರವನ್ನು ಅನಿರ್ದಿಷ್ಟಾವಧಿಗೆ ಮುಂದುವರಿಸುವ ಕುರಿತು ಅಂದೇ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಗಳಿವೆ.
ಕರ್ನಾಟಕದಲ್ಲಿ ಏಪ್ರಿಲ್ 1 ರಂದು ಅನ್ವಯವಾಗುವಂತೆ ಹಲವಾರು ತೆರಿಗೆ ದರಗಳು ಹೆಚ್ಚಿವೆ. ಇದರ ಜತೆಯಲ್ಲಿ ಸರ್ಕಾರವು ಹಾಲು, ವಿದ್ಯುತ್ ದರವನ್ನೂ ಹೆಚ್ಚಿಸಿದೆ. ಟೋಲ್ ದರಗಳನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.