Bangalore, ಫೆಬ್ರವರಿ 2 -- Karnataka Weather: ಸಂಕ್ರಾಂತಿ ಮುಗಿದ ನಂತರ ಕರ್ನಾಟಕದಲ್ಲಿ ನಿಧಾನವಾಗಿ ಬೇಸಿಗೆಯ ಅನುಭವ ಶುರುವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ ಮೊದಲ ವಾರದಲ್ಲಿಯೇ ಬಿರುಬಿಸಿಲಿನ ವಾತಾವರಣ ಕಂಡು ಬರುತ್ತಿದೆ. ಹಲವು ಜಿಲ್ಲೆಗಳಲ್ಲಿ ಈಗಲೇ ಗರಿಷ್ಠ ಉಷ್ಣಾಂಶದ ಪ್ರಮಾಣ 33 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆ ಹಾಗೂ ಕಿತ್ತೂರು ಕರ್ನಾಟಕ ಪ್ರದೇಶದ ಗದಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಪ್ರಮಾಣ 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ರಾಯಚೂರು, ದಾವಣಗೆರೆಯಲ್ಲೂ ಬಿಸಿಲಿನ ಝಳ ಆಗಲೇ ಹೆಚ್ಚತೊಡಗಿದೆ. ಮಲೆನಾಡಿನ ಶಿವಮೊಗ್ಗದಲ್ಲಿ ಕಡಿಮೆ ಉಷ್ಣಾಂಶ ಬೆಳಗಿನ ವೇಳೆ ದಾಖಲಾಗಿದೆ. ಚಿಕ್ಕಮಗಳೂರಿನಲ್ಲೂ ಚಳಿಯ ಹವಾಮಾನ ಮುಂದುವರಿದಿದೆ. ಬೆಂಗಳೂರಿನಲ್ಲೂ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.