Bengaluru, ಮಾರ್ಚ್ 6 -- Karnataka Weather: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಕಲ್ಯಾಣ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಈಗಲೇ ಉಷ್ಣಾಂಶದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲಬುರಗಿ, ಕೊಪ್ಪಳ, ರಾಯಚೂರು ಭಾಗದಲ್ಲಿ ಒಂದು ತಿಂಗಳಿನಿಂದಲೂ ನಿರಂತರವಾಗಿ ಉಷ್ಣಾಂಶದ ಲ್ಲಿ ಹೆಚ್ಚಳವಾಗುತ್ತಲೇ ಇದೆ. ಈಗಲೂ ಕಲಬುರಗಿಯ ಬಿಸಿಲಿನ ಝಳಕ್ಕೆ ಜನ ಹೈರಾಣಾಗಿದ್ದಾರೆ. ಇದೇ ರೀತಿ ಗದಗ ಜಿಲ್ಲೆಯಲ್ಲೂ ಉಷ್ಣಾಂಶ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಧ್ಯ ಕರ್ನಾಟಕ, ಕರಾವಳಿ ಕರ್ನಾಟಕದಲ್ಲೂ ಏರಿಳಿತವಿದೆ. ಬೆಂಗಳೂರಿನಲ್ಲಿ ಉಷ್ಣಾಂಶ ಪ್ರಮಾಣದಲ್ಲಿ ಕೊಂಚ ಹೆಚ್ಚೇ ಕಂಡು ಬಂದಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಗರಿಷ್ಠ ಉಷ್ಣಾಂಶದಲ್ಲಿ ಗಮನಾರ್ಹ ಬದಲಾವಣೆ ಇರೋಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ತಿಳಿಸಿದೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.