Kumble Sundar Rao death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ
ಭಾರತ, ನವೆಂಬರ್ 30 -- ಮಂಗಳೂರು: ಯಕ್ಷಗಾನ ಲೋಕದ ಮಾಣಿಕ್ಯವೊಂದು ಕಳಚಿಕೊಂಡಿದೆ. ಖ್ಯಾತ ಯಕ್ಷಗಾನ ಮತ್ತು ತಾಳೆ ಮದ್ದಳೆ ಕಲಾವಿದರಾದ, ಮಾಜಿ ಶಾಸಕ ಕುಂಬ್ಳೆ ಸುಂದರರಾವ್ (88) ಇಂದು ಮುಂಜಾನೆ ನಿಧನರಾಗಿದ್ದಾರೆ.
ಯಕ್ಷಗಾನ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. ಕಾರ್ಯರ್ಕಾಡಿ ಕುಂಙಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಇವರು ಕೇರಳದ ಕುಂಬಳೆಯಲ್ಲಿ ಜನಿಸಿದರು.
ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ 1994ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂಲೇ ಆರಿಸಲ್ಪಟ್ಟ ಶಾಸಕರೆಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಿದ್ದರು.
ಖ್ಯಾತ ಯಕ್ಷಗಾನ ಕಲಾವಿದ, ತಾಳಮದ್ದಳೆ ಕೂಟದ ವಾಗ್ಮಿ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ನಿಧನದಿಂದ ಯಕ್ಷಗಾನ ಅಭಿಮಾನಿಗಳು ದುಃಖದ ಮಡುವಿನಲ್ಲಿದ್ದಾರೆ...
Click here to read full article from source
To read the full article or to get the complete feed from this publication, please
Contact Us.