ಭಾರತ, ಮಾರ್ಚ್ 29 -- Mangaluru Water Metro: ಕರ್ನಾಟಕ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಟರ್ ಮೆಟ್ರೊ ಆರಂಭಿಸುವ ಘೋಷಣೆಯನ್ನು ಮಾಡಿದ ಮೇಲೆ ಈ ಕುರಿತು ಎದ್ದಿರುವ ಆಕಾಂಕ್ಷೆಗಳಿಗೆ ರೆಕ್ಕೆಪುಕ್ಕ ಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, 2026ರಲ್ಲಿ ಯಾವುದಾದರೂ ಒಂದು ತಿಂಗಳು ಕಡಲತಡಿಯ ಮಂಗಳೂರಿನಲ್ಲಿ ವಾಟರ್ ಮೆಟ್ರೋ ಸೇವೆ ಆರಂಭಗೊಳ್ಳಲಿದೆ. ಬೆಳೆಯುತ್ತಿರುವ ಮಂಗಳೂರಿನ ಸಾರಿಗೆ ನಿಯಂತ್ರಣಕ್ಕೂ ಇದು ಸಹಕಾರಿಯಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್ ನಲ್ಲಿ ವಾಟರ್ ಮೆಟ್ರೋ ಜೊತೆಗೆ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಯೋಜನೆಯನ್ನು ಘೋಷಿಸಿದ್ದಾರೆ. ಸಮುದ್ರ ಮತ್ತು ರಾಷ್ಟ್ರೀಯ ಜಲಮಾರ್ಗಗಳಲ್ಲಿ ಸರಕು ಮತ್ತು ಪ್ರಯಾಣಿಕರ ಚಲನೆ ಉತ್ತೇಜಿಸುವ ಕೋಸ್ಟಲ್ ಬರ್ತ್ ಯೋಜನೆಯನ್ನು ಘೋಷಣೆ ಮಾಡಲಾಗಿದೆ ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿನ ಹೊನ್ನಾವರ ಬಳಿಯ ಮಂಕಿಯಲ್ಲಿ ಬಂದರು ನಿರ್ಮಾಣ ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರ ಹಾಗೂ ನದಿ ಕೃಷಿ ಪ್ರವಾಸೋದ್ಯಮಕ್ಕೆ ವಿಸ್ತೃತ ಯ...
Click here to read full article from source
To read the full article or to get the complete feed from this publication, please
Contact Us.