ಭಾರತ, ಏಪ್ರಿಲ್ 9 -- Nanjangud Rathotsava 2025: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗೌತಮ ಪಂಚ ಮಹಾ ರಥೋತ್ಸವ ಅದ್ಧೂರಿಯಾಗಿ ನಡೆದಿದೆ. ಇಂದು (ಏಪ್ರಿಲ್ 9, ಬುಧವಾರ) ಬೆಳಿಗಿನ ಜಾವ 5 ರಿಂದ 5.40 ರೊಳಗಿನ ಶುಭ ಮೀನ ಲಗ್ನದಲ್ಲಿ ನಡೆದ ಪಂಚ ಮಹಾರಥೋತ್ಸವ ನಡೆದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿದ್ದರು.
ಬೆಳಿಗ್ಗೆಯಿಂದಲೇ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಆ ಬಳಿಕ ಉತ್ಸವ ಮೂರ್ತಿ ಮೂರ್ತಿಗಳ ಮೆರವಣಿಗೆ ನಡೆಯಿತು. ಶ್ರೀಕಂಠೇಶ್ವರಸ್ವಾಮಿ, ಪಾರ್ವತಿ ಅಮ್ಮನವರು, ಗಣೇಶ, ಸುಬ್ರಹ್ಮಣ್ಯಸ್ವಾಮಿ, ಚಂಡೀಕೇಶ್ವರ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಸರ್ವಾಲಂಕೃತ ರಥಗಳಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗಿಯಿತು. ದೊಡ್ಡ ತೇರಿನಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ಜರುಗಿತು. ಈ ವೇಳೆ ಭಕ್ತರು ನಂಜುಂಡೇಶ್ವರನ ತೇರು ಎಳೆದು ತಮ್ಮ ಭಕ್ತಿ ಭಾವವನ್ನು ಅರ್ಪಿಸಿದರು. ಅಂತಿಮವಾಗಿ ನಂಜುಂಡೇಶ್ವರ ಸ್ವಾಮಿಯ ಗೌತಮ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಂಡು ಭಕ್ತರು ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.