ಭಾರತ, ಏಪ್ರಿಲ್ 10 -- Who is Narender Mann: ಮುಂಬಯಿ 26/11 ದಾಳಿ ಪ್ರಕರಣದ ಪ್ರಮುಖ ಸಂಚುಕೋರ ತಹವ್ವುರ್ ಹುಸೇನ್ ರಾಣಾ ಅಲಿಯಾಸ್ ತಹವ್ವುರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡ ಭಾರತಕ್ಕೆ ಕರೆ ತರಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಗೃಹ ಸಚಿವಾಲಯವು ಬುಧವಾರ ತಡರಾತ್ರಿ ಪ್ರಕಟಿಸಿದ ಗಜೆಟ್ ಅಧಿಸೂಚನೆಯಲ್ಲಿ ಈ ಕೇಸ್‌ನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹಿರಿಯ ವಕೀಲ ನರೇಂದರ್ ಮಾನ್ ಅವರನ್ನು ನಿಯೋಜಿಸಿದೆ. ಅಧಿಸೂಚನೆಯ ಪ್ರಕಾರ, ಮಾನ್ ಅವರು ಮುಂದಿನ ಮೂರು ವರ್ಷ ಕಾಲ ಮುಂಬೈ ದಾಳಿ ಪ್ರಕರಣದಲ್ಲಿ ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯಗಳು ಹಾಗೂ ವಿವಿಧ ಹೈಕೋರ್ಟ್‌ಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಲಿದ್ದಾರೆ.

ದೆಹಲಿಯಲ್ಲಿ ವಕೀಲಿಕೆ ಮಾಡುತ್ತಿರುವ ಹಿರಿಯ ವಕೀಲ ನರೇಂದರ್ ಮಾನ್‌. ಗೃಹ ಸಚಿವಾಲಯ ಪ್ರಕಟಿಸಿದ ಅಧಿಸೂಚನೆಯಲ್ಲಿ "ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ, 2008 ರ ಸೆಕ್ಷನ್ 15 (2008 ರ 34) ರ ಉಪ-ವಿಭಾಗ (1) ಮತ್ತು ಭಾರತೀಯ ನಾಗರಿಕ ರಕ್ಷಣಾ ಸಂಹಿತೆ, 2023 (ಬಿ...